ನವದೆಹಲಿ : ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಆರ್ಯ ಸಮಾಜದ ಮುಖಂಡ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್(84) ಇಂದು ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
21ನೇ ಸೆಪ್ಟೆಂಬರ್ 1939ರಂದು ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಜನಿಸಿದ್ದ ಅವರು ಹರಿಯಾಣದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆರ್ಯ ಸಮಾಜದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
1977 ರಲ್ಲಿ ಅಗ್ನೀವೇಶ್ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು ಮತ್ತು 1979 ರಲ್ಲಿ ಶಿಕ್ಷಣಕ್ಕಾಗಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1981 ರಲ್ಲಿ, ಮಂತ್ರಿಯಾಗಿದ್ದಾಗ ಅವರು ಬಂಧಿತ ಲೇಬರ್ ಲಿಬರೇಷನ್ ಫ್ರಂಟ್ ಅನ್ನು ಸ್ಥಾಪಿಸಿದ್ದರು.
ಜೀತದಾಳುಗಳ ವಿಮುಕ್ತಿಗಾಗಿ ಹೋರಾಡಲೆಂದು 1981ರಲ್ಲಿ ಬಾಂಡೆಡ್ ಲೇಬರ್ ಲಿಬರೇಶನ್ ಫ್ರಂಟ್ ಸ್ಥಾಪಿಸಿದ್ದರು. 2004ರಿಂದ 2014ರವರೆಗೆ ಆರ್ಯ ಸಮಾಜದ ವಿಶ್ವ ಮಂಡಳಿಯ ಅಧ್ಯಕ್ಷರಾಗಿದ್ದರು. 1994ರಿಂದ 2004ರವರೆಗೆ ವಿಶ್ವಸಂಸ್ಥೆಯ ಜೀತ ವಿಮುಕ್ತಿಗಾಗಿನ ನಿಧಿಯ ಅಧ್ಯಕ್ಷರಾಗಿದ್ದರು.