ಹೊಸ ದಿಗಂತ ಆನ್ ಲೈನ್ ಡೆಸ್ಕ್:
ವಿಧಾನಮಂಡಲದ ಜಂಟಿ ಅಧಿವೇಶನ ಜ.28 ರಿಂದ ಫೆ.5ರವರೆಗೆ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಿದ್ದು,1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ.
0.2ರಿಂದ 1.5ಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆ ಹೆಚ್ಚಳಕ್ಕೆ ಮತ್ತು ಬಾನಂದೂರಿನಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರ ನಿರ್ಮಾಣಕ್ಕಾಗಿ 25 ಕೋಟಿ ರೂ. ವೆಚ್ಚದ ಯೋಜನೆಗೆ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ.