ಬಳ್ಳಾರಿ: ಜಿಲ್ಲೆಯಸಂಡೂರು ಪುರಸಭೆಯ ಪೌರ ಕಾರ್ಮಿಕ ಗಿರಿಯಪ್ಪ ಅವರ ಮಗ ಯಾಹನ್ ಅವರು ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.88 ಅಂಕಗಳನ್ನು ಪಡೆದು ಸಂಡೂರು ತಾಲೂಕಿಗೆ ಮೊದಲ ಪಡೆದಿದ್ದಾರೆ. ತಾಲೂಕಿಗೆ ಸ್ಥಾನ ಪಡೆದ ಪೌರ ಕಾರ್ಮಿಕನ ಮಗ ಯಾಹನ್ ಅವರಿಗೆ ಸಂಡೂರು ಪುರಸಭೆ ಅನುದಾನದ ಅಡಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಲ್ಯಾಪ್ ಟಾಪ್ ವಿತರಿಸಿ
ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಬಿ.ಎಸ್, ಸಂಡೂರು ಪುರಸಭೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಹಾಗೂ ವಿದ್ಯಾರ್ಥಿಯ ಪಾಲಕರು ಇತರರಿದ್ದರು.