ಹೊಸ ದಿಗಂತ ವರದಿ, ಮಂಡ್ಯ :
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆದರೆ ಹಾನಗಲ್ನಲ್ಲಿ ನಾವು ನಿರೀಕ್ಷಿಸಿದಷ್ಟು ಮತ ಬಂದಿಲ್ಲಘಿ. ನಾವೂ ಸಹ ಹೋರಾಟ ಮಾಡಿದ್ದೇವೆ. ಆದರೆ ಲಿತಾಂಶದಲ್ಲಿ ಏರುಪೇರಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆ.ಆರ್.ಎಸ್.ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಉದಾಸಿ ಅವರಿಗೆ ಸಲ್ಲಬೇಕಿದ್ದ ಮತಗಳ ಬೆಂಬಲ ಪಡೆದುಕೊಳ್ಳಲು ನಮಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಳೆದ ಎರಡು ಮೂರು ವರ್ಷದಲ್ಲಿ ಮಾಡಿರುವ ಕೆಲಸವನ್ನು ಜನ ಕೈ ಹಿಡಿದಿದ್ದಾರೆ. ಹೀಗಾಗಿ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಿದರು.
ನಮ್ಮ ಪಕ್ಷದ ಹಿರಿಯರು, ಕಾರ್ಯಕರ್ತರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅವರಿಗೂ ನಾನು ಧನ್ಯವಾದ ಹೇಳುತ್ತೇನೆ. ಉಪ ಚುನಾವಣೆಯಲ್ಲಿ ಒಂದರಲ್ಲಿ ಗೆದ್ದುಘಿ, ಒಂದರಲ್ಲಿ ಸೋತಿದ್ದೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯ ಲಿತಾಂಶ ಬಂದಿತ್ತುಘಿ. ಈ ಲಿತಾಂಶವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಮುಂದೆ ಎಲ್ಲಾ ತಪ್ಪುಗಳನ್ನು ಸರಿಪರಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಸಿಂದಗಿ ಲಿತಾಂಶದಲ್ಲಿ ಹಣದ ಅಬ್ಬರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ
ಸ್ವಾಮಿ ಹೇಳಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ ಬೊಮ್ಮಾಯಿ, ಚುನಾವಣೆಯಲ್ಲಿ ಸೋತವರ ಸ್ಟ್ಯಾಂಡರ್ ಾರ್ಮೆಟ್ ಇದು. ಹಣ, ತೋಲ್ಬಲದಿಂದ ಗೆಲುವಾಗಿದೆ ಎಂಬುದು ಸರಿಯಲ್ಲಘಿ. ಜನ ಬೆಂಬಲ ಇಲ್ಲದೆ ಯಾವುದೇ ಚುನಾವಣೆಯನ್ನೂ ಗೆಲಲ್ಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಕ್ರಮ ವಹಿಸುತ್ತೇವೆ. ಸೋಲನ್ನೂ ಗೆಲುವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮುಂದೆ ಗೆಲ್ಲುವ ನಿಟ್ಟಿನಲ್ಲಿ ಆಡಳಿತಾತ್ಮಕವಾಗಿ, ರಾಜಕೀಯವಾಗಿ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳುವುದಾಗಿ ತಿಳಿಸಿದರು.
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಸ್ಮಾರಕ ನಿರ್ಮಾಣ ಸಂಬಂಧ ಅವರ ಕುಟುಂಬದೊಂದಿಗೆ ಚರ್ಚೆ ನಡೆಸಿ ಬಳಿಕ ಸರ್ಕಾರದಿಂದಲೇ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು