ಮೈಸೂರು: ಕಳೆದ ೧೨ ವರ್ಷಗಳಿಂದಲೂ ಮೈಸೂರಿನಲ್ಲಿ ನೆನಗುದಿಗೆ ಬಿದ್ದರುವ `ಅಂಬೇಡ್ಕರ್ ಭವನ’ ನಿರ್ಮಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಮೈಸೂರು ನಗರಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಒತ್ತಾಯಿಸಿದ್ದಾರೆ.
ನಗರದ ದಿವಾನ್ಸ್ ರಸ್ತೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದಕ್ಕೆ ನನ್ನ ಅವಧಿಯಲ್ಲಿ ನಗರಪಾಲಿಕೆಯಿಂದ ಮೂರು ಕೋಟಿ ಬಿಡುಗಡೆ ಮಾಡಲಾಗಿತ್ತು. ಮುಡಾದಿಂದ ೧೦ ಕೋಟಿ, ಸಮಾಜ ಕಲ್ಯಾಣ ಇಲಾಖೆಯಿಂದ ೭ ಕೋಟಿ ಬಿಡುಗಡೆಯಾಗಿದೆ. ಒಟ್ಟು ೨೦ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇನ್ನೂ ಇಪ್ಪತ್ತು ಕೋಟಿಗೆ ಬೇಡಿಕೆಯಿದೆ. ಆದರೂ ಸರ್ಕಾರಗಳು ಹಣ ಕೊಡುವುದಕ್ಕೆ ಮುಂದಾಗುತ್ತಿಲ್ಲ. ಕಾಮಗಾರಿ ಪೂರ್ಣ ಮಾಡುವುದಕ್ಕೆ ಯಾರಿಗೂ ಇಷ್ಟವಿಲ್ಲ ಎಂದು ಕಿಡಿಕಾರಿದರು
ಈ ಸಂಬoಧ ಮುಡಾ ಅಧ್ಯಕ್ಷ ರಾಜೀವ್ ಗೆ ಸದ್ಯದಲ್ಲೇ ಮನವಿ ಸಲ್ಲಿಸುತ್ತೇನೆ. ಆರು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಖಬೇಕು. ಇಲ್ಲವಾದರೆ ನಿರಂತರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.