ಹೊಸದಿಗಂತ ವರದಿ, ರಾಮನಗರ:
ಕನಕಪುರ ತಾಲ್ಲೂಕಿನ ಮರಳವಾಡಿ ಬಸ್ನಿಲ್ದಾಣದಲ್ಲಿ ಕರವೇ ಮತ್ತು ಕೆಂಪೇಗೌಡ ಆಟೋ ಚಾಲಕರ ಸಂಘದಿoದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಈ ವೇಳೆ ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ಕುಮಾರಸ್ವಾಮಿ ಕಾರ್ಮಿಕರಿಗೆ ಆಹಾರದ ಕಿಟ್ಗಳನ್ನು ವಿತರಿಸಿದರು. ರಾಮನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್, ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣ ಯುವಮುಖಂಡ ಗೌತಂಗೌಡ, ಗ್ರಾ.ಪಂ. ಮಾಜಿ ಅಧ್ಯಕ್ಷ ಭೈರೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.