ಮಡಿಕೇರಿ: ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಕೊಡಗಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಕೊಡಗಿಗೆ ಆಗಮಿಸಿದ ಅವರನ್ನು ಜಿಲ್ಲೆಯ ಗಡಿ ಕೊಪ್ಪಗೇಟ್ನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಮತ್ತಿತರರು ಮಾಲಾರ್ಪಣೆ ಮಾಡಿ ಬರ ಮಾಡಿಕೊಂಡರು.
ನಿಖಿಲ್ ಕುಮಾರಸ್ವಾಮಿ ಅವರು, ಪ್ರವಾಹ ಪೀಡಿತ ಪ್ರದೇಶಗಳಾದ ಕುಶಾಲನಗರ, ನಾಪೋಕ್ಲು, ಸಿದ್ದಾಪುರ, ಪ್ರಾಕೃತಿಕ ವಿಕೋಪ ಸಂಭವಿಸಿರುವ ತಲಕಾವೇರಿ ಭಾಗಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಇವರೊಂದಿಗೆ ಪಕ್ಷದ ಜಿಲ್ಲಾ ಪ್ರಮುಖರೂ ಪಾಲ್ಗೊಳ್ಳಲಿದ್ದಾರೆ.