ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ಪಟ್ಟಣದ ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿ ಅವರು ಕೊರೋನಾ ಸೋಂಕಿನಿAದ ಗುಣಮುಖರಾಗಿದ್ದು, ಮಂಗಳವಾರ ಅವರನ್ನು ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಎಚ್ ಡಿ.ಕೋಟೆ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪುಟ್ಟಸ್ವಾಮಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿತ್ತು, ಈ ಹಿನ್ನೆಲೆಯಲ್ಲಿಅವರನ್ನು ಚಿಕಿತ್ಸೆಗಾಗಿ ಸುಮಾರು ಒಂದು ತಿಂಗಳ ಹಿಂದೆ ಮೈಸೂರಿನ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಸುಮಾರು ಒಂದು ತಿಂಗಳಿನಿAದ ಸತತವಾಗಿ ಚಿಕಿತ್ಸೆ ನೀಡಲಾಗಿತ್ತಾದರೂ ಕೂಡಾ ತೀವ್ರವಾಗಿ ನಿತ್ರಾಣಗೊಂಡ ಪುಟ್ಟಸ್ವಾಮಿ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಸ್ಥಳಾಂತರಿಸಿ, ನಿರಂತರ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿಗುಣಮುಖರಾದ ಅವರನ್ನು ಇಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಜೆ.ಎಸ್.ಎಸ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸೋಂಕಿತರಿಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು. ಈ ವೇಳೆ ಮೈಸೂರು ಡಿಸಿ ಅಭಿರಾಂ ಜಿ. ಶಂಕರ್, ಮೈಸೂರು ಎಸ್ಪಿ ರಿಷ್ಯಂತ್ ಸೇರಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.