ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಸರಿ ಎಂದು ಹೇಳಿ ಹಲವಾರು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಲಸಿಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ.
ಮೋದಿ ಅವರಿಗೆ ಬುಧವಾರ ದೂರವಾಣಿ ಕರೆ ಮಾಡಿ ನಮ್ಮ ದೇಶಕ್ಕೂ ಲಸಿಕೆ ಬೇಕಿದೆ. ಲಸಿಕೆ ನೀಡಿ ಜೀವ ಉಳಿಸಿ ಎಂದು ಟ್ರುಡೋ ಮನವಿ ಮಾಡಿದ್ದಾರೆ. ಅವರ ಮನವಿಗೆ ಮೋದಿ ಸ್ಪಂದಿಸಿದ್ದು, ಇತರ ದೇಶಗಳಿಗೆ ಕಳುಹಿಸಿರುವಂತೆ ಕೆನಡಾಗೂ ಶೀಘ್ರದಲ್ಲೇ ಲಸಿಕೆಗಳನ್ನು ಕಳುಹಿಸಲಾಗುವುದು. ಕೆನಡಾದ ಲಸಿಕೆ ಅಭಿಯಾನಕ್ಕೆ ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಈ ಕುರಿತಂತೆ ಮೋದಿ ಟ್ವೀಟ್ ಮಾಡಿದ್ದು, ನನ್ನ ಸ್ನೇಹಿತ ಜಸ್ಟಿನ್ ಟ್ರೂಡೊ ದೂರವಾಣಿ ಕರೆ ಮಾಡಿದ್ದಕ್ಕೆ ಸಂತೋಷವಾಯಿತು. ನೀವು ಭಾರತದ ಲಸಿಕೆಯ ಮೇಲೆ ವಿಶ್ವಾಸವಿಟ್ಟು, ಅದನ್ನು ಕೇಳುತ್ತಿರುವುದಕ್ಕೆ ಧನ್ಯವಾದ. ಕೆನಡಾ ಕೇಳಿದಷ್ಟು ಲಸಿಕೆ ಪೂರೈಸಲು ಭಾರತ ಪ್ರಯತ್ನ ಮಾಡುತ್ತದೆ ಎಂಬ ಭರವಸೆ ನೀಡಿದ್ದೇನೆ. ಹವಾಮಾನ ಬದಲಾವಣೆ, ಜಾಗತಿಕ ಆರ್ಥಿಕ ಪುನಶ್ಚೇತನ ಸೇರಿದಂತೆ ಇತರ ಮಹತ್ವದ ವಿಷಯಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.
Was happy to receive a call from my friend @JustinTrudeau. Assured him that India would do its best to facilitate supplies of COVID vaccines sought by Canada. We also agreed to continue collaborating on other important issues like Climate Change and the global economic recovery.
— Narendra Modi (@narendramodi) February 10, 2021