ಬೆಂಗಳೂರು: ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಅವರು ಸರಣಿ ಟ್ವೀಟ್ ಮಾಡಿ ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಸುಮಾರು 5000 ಕೋಟಿ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿರುವ ಸರ್ಕಾರ ಇರುವುದನ್ನು ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು.
1/5— H D Kumaraswamy (@hd_kumaraswamy) August 18, 2020