ಚಿಕ್ಕಬಳ್ಳಾಪುರ: ಮಹಾರಾಷ್ಟ್ರದಿಂದ 250 ಜನ ಆಗಮಿಸುತ್ತಿದ್ದು, ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬುಧವಾರ ರಾತ್ರಿ ಟ್ವೀಟ್ ಮಾಡಿದ್ದ ಅವರು, ಸೋಂಕು ವ್ಯಾಪಕವಾಗಿರುವ ಮಹಾರಾಷ್ಟ್ರದಿಂದ ಸುಮಾರು 250 ಜನರನ್ನು 6 ಬಸ್ಸುಗಳಲ್ಲಿ ಚಿಕ್ಕಬಳ್ಳಾಪುರಕ್ಕೆ ಕಳುಹಿಸಿರುವುದು ದುರದೃಷ್ಟಕರ ಹಾಗು ದುಡುಕಿನ ನಿರ್ಧಾರ. ಹೊರರಾಜ್ಯದ ಪ್ರಯಾಣಿಕರಿಂದ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದೆಂಬ ಆತಂಕ ಹಾಗೂ ದುಗುಡದಿಂದ ನಿದ್ದೆ ಬರುತ್ತಿಲ್ಲ. ಎಲ್ಲಾ ಜಿಲ್ಲಾಡಳಿತಗಳು ಎಚ್ಚರವಹಿಸಬೇಕು ಎಂದಿದ್ದಾರೆ.
ಗುರುವಾರ ಬೆಳಗ್ಗೆ ಮತ್ತೊಂದು ಟ್ವೀಟ್ ಮಾಡಿರುವ ಸಚಿವರು, ನಾನು ಈಗಾಗಲೇ ಮಖ್ಯ ಕಾರ್ಯದರ್ಶಿಯವರ ಜೊತೆ ಮಾತಾಡಿದ್ದೀನೆ. ಎರಡು ದಿನಗಳಿಂದ ನಮ್ಮ ಗಡಿಗೆ ಬಂದು ಕಾಯುತ್ತಿದ್ದರು. ಹಾಗಾಗಿ ಮಾನವೀಯತೆ ದೃಷ್ಟಿಯಿಂದ ಬಿಡಬೇಕಾಯಿತು ಎಂದು ಸಮಜಾಯಷಿ ಕೊಟ್ಟರು. ಹೊರ ರಾಜ್ಯದಿಂದ ಬಂದ ಎಲ್ಲರನ್ನೂ ಕ್ವಾರಂಟೈನ್ ಮಾಡುತ್ತೇವೆ ಹಾಗೂ ಎಲ್ಲರಿಗೂ ಪರೀಕ್ಷೆಯನ್ನು ಮಾಡುತ್ತೇವೆ. ಆಯಾ ಜಿಲ್ಲೆಯ ಯಾರು ಆತಂಕಕ್ಕೆ ಒಳಗಾಗಬೇಡಿ ಎಂದು ಬರೆದುಕೊಂಡಿದ್ದಾರೆ.