ಹೊಸದಿಲ್ಲಿ: ಕೊರೋನಾ ದಿಂದ ಕಳೆದ ಸೆಪ್ಟೆಂಬರ್ 17ರಂದು ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಡಿಸೆಂಬರ್ 1ರಂದು ಮತದಾನ ನಡೆದು, ಅದೇ ದಿನ ಮತ ಎಣಿಕೆ ನಡೆಯಲಿದೆ.
ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನದ ಚುನಾವಣೆ ಜೊತೆ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಐದು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ ಎಂದು ಪ್ರಕಟಣೆ ಹೇಳಿದೆ. ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗುವ ಎಲ್ಲರೂ ಫೇಸ್ ಮಾಸ್ಕ್ ಧರಿಸಬೇಕು ಎಂದು ಆಯೋಗ ಹೇಳಿದೆ.