ದಾವಣಗೆರೆ: ಕೊರೋನಾ ಮಹಾಮಾರಿಗೆ ಸೋಮವಾರ ವೃದ್ಧರೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಇದಲ್ಲದೇ ಒಂದೇ ದಿನ 110 ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 60 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯ ಹರಿಹರ ಬೆಂಕಿ ನಗರದ 65 ವರ್ಷದ ವೃದ್ಧ ಮೊನ್ನೆ ಸಾವನ್ನಪ್ಪಿದ್ದು, ಇವರಿಗೆ ಕೊರೋನಾ ಸೋಂಕು ಇರುವುದು ಸೋಮವಾರದ ವರದಿಯಲ್ಲಿ ದೃಢಪಟ್ಟಿದೆ. ಹೊಸ ಪ್ರಕರಣಗಳಲ್ಲಿ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ದಾವಣಗೆರೆ ತಾಲೂಕಿನಲ್ಲಿ 73, ಜಗಳೂರು 16, ಚನ್ನಗಿರಿ ಮತ್ತು ಹರಿಹರ ತಲಾ 7 ಹಾಗೂ ಹೊನ್ನಾಳಿ ತಾಲೂಕಿನಲ್ಲಿ 3, ಹೊರಜಿಲ್ಲೆಯ 4 ಮಂದಿಗೆ ಸೋಂಕು ತಗುಲಿದೆ.
ದಾವಣಗೆರೆ ತಾಲೂಕಿನಲ್ಲಿ 41, ಹರಿಹರ 11, ಹೊನ್ನಾಳಿ 4, ಜಗಳೂರು ಮತ್ತು ಚನ್ನಗಿರಿ ತಾಲೂಕಿನಲ್ಲಿ ತಲಾ 2 ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1533 ಪಾಸಿಟಿವ್ ಕೇಸ್ ವರದಿಯಾಗಿದ್ದು, 37 ಜನರು ಸಾವನ್ನಪ್ಪಿದ್ದಾರೆ. 927 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 569 ಸಕ್ರಿಯ ಪ್ರಕರಣಗಳ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.