ಧಾರವಾಡ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ವೈದ್ಯಕೀಯ, ಅರೆ ವೈದ್ಯಕೀಯ ನೌಕರರು ಹಾಗೂ ಕಚೇರಿ ಸಿಬ್ಬಂದಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಎದುರಿಗೆ ಬುಧವಾರ ಪ್ರತಿಭಟಿಸಿದರು.
ಸುಮಾರು ಗಂಟೆಗಳ ಕಾಲ ಪ್ರತಿಭಟಿಸಿದ ನೌಕರರು, ರಾಜ್ಯ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸುವಂತೆ ಹಕವು ವರ್ಷದಿಂದ ಮನವಿ ಮಾಡಿದರೂ, ಅಧಿಕಾರಿಗಳು ಹಾಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಆಪಾದಿಸಿದರು.
ಆರೋಗ್ಯ ಕ್ಷೇತ್ರದ ಬಜೆಟ್ ಹೆಚ್ಚಳ, ಕೇಂದ್ರ ಸರ್ಕಾರದ ಆರ್ಥಿಕ ನೆರವು, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ನೌಕರರ ಹುದ್ದೆ ಖಾಯಂ ಮಾಡುವುದು, ವೇತನ ಭತ್ಯ ಹಾಗೂ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಪ್ರಸಕ್ತ ಅಧಿವೇಶನ ವೇಳೆಯಲ್ಲಿ ತಮ್ಮ ಬೇಡಿಕೆ ಈಡೇರಸದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿ, ಆರೋಗ್ಯ-ಕುಟುಂಬ ಕಲ್ಗಾಯ ಇಲಾಖೆ ಜಿಲ್ಲಾ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಸಂಘಟನೆ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಎಚ್.ವೈ ಸೇರಿದಂತೆ ಗುತ್ತಿಗೆ-ಹೊರ ಗುತ್ತಿಗೆ ನೌಕರರು ಇದ್ದರು.