ಹೊಸದಿಗಂತ ಆನ್ ಲೈನ್ ಡೆಸ್ಕ್:
ಧಾರ್ಮಿಕ ಹಕ್ಕು, ಜೀವಿಸುವ ಹಕ್ಕಿಗಿಂತ ಯಾವುದೇ ರೀತಿಯೂ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಇಂದು ತಮಿಳುನಾಡಿನ ಐತಿಹಾಸಿಕ ದೇವಾಲಯವಾದ ಶ್ರೀರಂಗಂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ನಡೆಸಲು ಹಿಂದು ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಸೂಚನೆ ನೀಡಬೇಕೆಂದು ಹೈಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ಈ ರೀತಿಯಾಗಿ ಹೇಳಿದೆ.
ಧರ್ಮದ ಆಚರಣೆಗಳು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರುವುದು ಮಾತ್ರವಲ್ಲದೇ ಜೀವನದ ಹಕ್ಕನ್ನೂ ಕೂಡಾ ಪ್ರತಿಪಾದಿಸಬೇಕು.ಕೋವಿಡ್ ಸೋಂಕಿನ ಪರಿಸ್ಥಿತಿಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇದರಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಅವರು ಹೇಳಿದ್ದಾರೆ.
ಆದರೆ ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ದ ಯಾವುದೇ ರಾಜಿ ಮಾಡಿಕೊಳ್ಳದೆ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುವ ಸಾಧ್ಯತೆಯನ್ನು ಪರಿಶೀಲೀಸುವಂತೆ ಮುಖ್ಯ ನ್ಯಾಯಮೂರ್ತಿ ಬ್ಯಾನರ್ಜಿ, ನ್ಯಾಯಮೂರ್ತಿಗಳಾದ ಸೆಂಥಿಲ್ ಕುಮಾರ್ ಮತ್ತು ರಾಮಮೂರ್ತಿ ಅವರಿದ್ದ ತ್ರಿಸದಸ್ಯ ಪೀಠ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.