ನಿಗಮ ಮಂಡಳಿಗೆ ನೇಮಕ ಪಟ್ಟಿ ಹೈಕಮಾಂಡ್ ಅಂಗಳಕ್ಕೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಿಗಮ ಮಂಡಳಿಗೆ ನೇಮಕ (Corporation Board Appointment) ಸಂಬಂಧ ಪಟ್ಟಿ ಕೇಂದ್ರ ನಾಯಕರಿಗೆ ರವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳವಾರ ಸಂಜೆ ತಿಳಿಸಿದರು.

ಕಾಂಗ್ರೆಸ್​ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ಅನುಮತಿ ನೀಡಿದ ನಂತರ ನೇಮಕಾತಿ ಮಾಡುತ್ತೇವೆ ಎಂದರು.

ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!