ಹೊಸದಿಗಂತ ಆನ್ ಲೈನ್ ಡೆಸ್ಕ್:
ನಿವಾರ್ ಚಂಡಮಾರುತಕ್ಕೆ ಈಗಾಗಲೇ ತಮಿಳುನಾಡಿನ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಪಳನಿಸ್ವಾಮಿ ಜೊತೆ ಮಾತನಾಡಿದ ಪ್ರಧಾನಿ ಮೋದಿ ತೊಂದರೆಗೊಳಗಾದವರಿಗೆ ಪರಿಹಾರ ಘೋಷಿಸಿದ್ದಾರೆ.
ನಿವಾರ್ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪಿಎಂಒ ಕಚೇರಿಯು ಅಧಿಕೃತ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಚಂಡಮಾರುತ ಮತ್ತು ಭಾರಿ ಮಳೆಯ ಪರಿಸ್ಥಿತಿ ಕುರಿತು ಚರ್ಚೆ ಮಾಡಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಸಹಕರಿಸಲು ಕೇಂದ್ರ ತಂಡಗಳನ್ನು ತಮಿಳುನಾಡಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದೆ.
PM @narendramodi expressed condolence on the loss of lives and prayed for a quick recovery of the injured. An ex-gratia of Rs. 2 lakh each would be given to the next of kin of the persons deceased and Rs. 50,000 each to the injured, from the PMNRF. @CMOTamilNadu
— PMO India (@PMOIndia) November 27, 2020
ಭಾರಿ ಮಳೆಯ ಹಿನ್ನಲೆ ತಮಿಳುನಾಡು, ಪುದುಚರಿ, ಚೆನೈ ನ ಪ್ರದೇಶಗಳಲ್ಲಿ ಹಾನಿಯಾಗಿದ್ದು, 4 ಮಂದಿ ಬಲಿಯಾಗಿದ್ದಾರೆ. 18 ಜಿಲ್ಲೆಗಳಲ್ಲಿ ಬರೋಬ್ಬರಿ 2 ಸಾವಿರ ಮರಗಳು ನೆಲಕ್ಕುರುಳಿದೆ. ನೆರೆಯಲ್ಲಿ ಸಿಲುಕಿದ್ದ ಸುಮಾರು 2.3 ಲಕ್ಷ ಮಂದಿಯನ್ನು ಸಂತ್ರಸ್ತ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.