ಬೆಂಗಳೂರು: ಪ್ರತಿ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸಿಕೊಡುವುದು ಸರ್ಕಾರದ ಪ್ರಥಮ ಆಧ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ ಎಂದು ನಿನ್ನೆ ವೈದ್ಯಕೀಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದರು.
ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ಕಿಮ್ಸ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ ಹೆಚ್ಚು ರೋಗಿಗಳನ್ನು ವಿಕ್ಟೊರಿಯಾ, ಬೌರಿಂಗ್ & ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಅಂಬುಲನ್ಸ್ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ಭಾರೀ ಗಾತ್ರದ ಆಕ್ಸಿಜನ್ ಸಿಲಿಂಡರ್ ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಎಂಬುದನ್ನು ನಿನ್ನೆ ಸ್ಪಷ್ಟ ಪಡಿಸಿದ್ದರು.
ಇವತ್ತು ಟ್ವೀಟ್ ಮೂಲಕ ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿಸಲಾಗಿದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.
ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ. ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ.
— Dr Sudhakar K (@mla_sudhakar) August 17, 2020
ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ.
— Dr Sudhakar K (@mla_sudhakar) August 17, 2020