ಹೊಸದಿಲ್ಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಒಲವು ತೋರುವ ಕಾರಣಕ್ಕೆ ದೇಶದ ಕಂಪನೀಸ್ ಕಂಟೆಂಟ್ ಮಾಡರೇಶನ್ ನೀತಿಯಲ್ಲಿ ಹಸ್ತಕ್ಷೇಪ ಮಾಡಿದ ಆರೋಪದ ಹಿನ್ನೆಲೆ ಫೇಸ್ಬುಕ್ನ ಭಾರತದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ ಸಲ್ಲಿಸಿದ್ದಾರೆ.
ಫೇಸ್ಬುಕ್ ಇಂಡಿಯಾ, ದಕ್ಷಿಣ ಮತ್ತು ಮಧ್ಯ ಏಷ್ಯಾದ ಸಾರ್ವಜನಿಕ ನೀತಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ದಾಸ್ ಸಾರ್ವಜನಿಕ ಸೇವೆಯಲ್ಲಿ ತನ್ನ ಕಾಳಜಿಯನ್ನು ಮುಂದುವರಿಸಲು ಕಂಪನಿಯನ್ನು ತೊರೆಯುತ್ತಿದ್ದೇನೆ ಎಂದು ಹೇಳಿದರು.
ತನ್ನ ಸಹೋದ್ಯೋಗಿಗಳಿಗೆ ನೀಡಿದ ಸಂದೇಶದಲ್ಲಿ, ದಾಸ್ ” 2011 ರಲ್ಲಿ ಕಂಪನಿಗೆ ಸೇರಿದ ಸಮಯದಲ್ಲಿ ದೇಶದಲ್ಲಿದ್ದ ಫೇಸ್ಬುಕ್ ಮತ್ತು ಇಂಟರ್ನೆಟ್ ಪರಿಸರ ವ್ಯವಸ್ಥೆಯನ್ನು ವಿವರಿಸಿದರು. ನಾವು ಒಂದು ಸಣ್ಣ ಅನ್ ಲಿಸ್ಟೆಡ್ ಸ್ಟಾರ್ಟಪ್ ಆಗಿದ್ದೆವು,, ಆಗ ನಮ್ಮ ಮಿಷನ್ ಮತ್ತು ಭಾರತದಲ್ಲಿ ಜನರನ್ನು ಸಂಪರ್ಕಿಸುವ ಉದ್ದೇಶವನ್ನಷ್ಟೇ ಹೊಂದಿತ್ತು. . ಒಂಬತ್ತು ದೀರ್ಘ ವರ್ಷಗಳ ನಂತರ, ಮಿಷನ್ ದೊಡ್ಡ ಮಟ್ತದಲ್ಲಿ ಗುರಿ ಹೊಂದಿದೆ. ಕಂಪನಿಯ ನಂಬಲಾಗದಷ್ಟು ಸ್ಮಾರ್ಟ್ ಮತ್ತು ಪ್ರತಿಭಾವಂತ ಜನರಿಂದ, ವಿಶೇಷವಾಗಿಪಾಲಿಸಿ ಟೀಂ ಜನರಿಂದ ನಾನು ಕಲಿತದ್ದು ಅಗಾಧ. ಇದು ವಿಶೇಷ ಕಂಪನಿ ಮತ್ತು ವಿಶೇಷ ಜನರ ಗುಂಪು. ನಾನು ನಿಮಗೆ ಮತ್ತು ಕಂಪನಿಗೆ ಉತ್ತಮ ಸೇವೆ ಸಲ್ಲಿಸಿದ್ದೇನೆ, ನಾನು ಫೇಸ್ಬುಕ್ನಲ್ಲಿ ಸಂಪರ್ಕದಲ್ಲಿರುತ್ತೇವೆ ಎಂದು ನನಗೆ ಗೊತ್ತಿದೆ:” ಎಂದಿದ್ದಾರೆ.
ಫೇಸ್ ಬುಕ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಅಜಿತ್ ಮೋಹನ್ ಅವರು, ‘ಸಾರ್ವಜನಿಕ ಸೇವೆಯಲ್ಲಿ ಆಸಕ್ತಿ ಯನ್ನು ಮುಂದುವರಿಸಲು ಫೇಸ್ ಬುಕ್ ನ ತಮ್ಮ ಹುದ್ದೆಯಿಂದ ಕೆಳಗಿಳಿಯಲು ಅಂಕಿ ದಾಸ್ ನಿರ್ಧರಿಸಿದ್ದಾರೆ. ಭಾರತದ ಅತ್ಯಂತ ಹಳೆಯ ಉದ್ಯೋಗಿಗಳಲ್ಲಿ ಒಬ್ಬರಾದ ಅಂಕಿತಾ ದಾಸ್ ಕಳೆದ 9 ವರ್ಷಗಳಲ್ಲಿ ಕಂಪನಿ ಮತ್ತು ಅದರ ಸೇವೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ 2 ವರ್ಷಗಳಿಂದ ನನ್ನ ನಾಯಕತ್ವದ ತಂಡದ ಭಾಗವಾಗಿದ್ದಾರೆ, ಅವರು ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಅವರ ಸೇವೆಗೆ ನಾವು ಆಭಾರಿಯಾಗಿದ್ದೇವೆ ಮತ್ತು ಭವಿಷ್ಯದಲ್ಲಿ ಅವರಿಗೆ ಶುಭ ಹಾರೈಸುತ್ತೇವೆ’ ಎಂದು ಅವರು ಹೇಳಿದ್ದಾರೆ.