ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಜೆಎಂಎಫ್ಸಿ ನ್ಯಾಯಾಲಯ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದೆ.
ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವೀಟರ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್ ಆದೇಶ ನೀಡಿದೆ.
ಪ್ರಕರಣ ದಾಖಲು ಮಾಡುವಂತೆ ವಕೀಯ ಎಲ್ ರಮೇಶ್ ನಾಯ್ಕ್ ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನ್ಯಾಯಾಧೀಶ ವಿನೋದ್ ಬಾಲನಾಯಕ್ ಕ್ಯಾತ್ಸಂದ್ರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಸೆಕ್ಷನ್ 156(3) ರ ಅಡಿ ದೂರು ದಾಖಲು ಮಾಡಿಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಸೆಪ್ಟೆಂಬರ್ 21ರಂದು ನಟಿ ಕಂಗನಾ ರಣಾವತ್ ತಮ್ಮ ಟ್ವೀಟರ್ನಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್ ಮಾಡಿದ್ದರು.
A Karnataka court orders registration of FIR against actor Kangana Ranaut for her now-deleted tweet on farmers' protests over recently passed farm laws. (file photo) pic.twitter.com/Vd7GdZgHnC
— ANI (@ANI) October 9, 2020