ಹೊಸ ದಿಗಂತ ವರದಿ, ಮಂಗಳೂರು:
ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ.
ಈ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಹುಕಾಲದ ಪ್ರಯತ್ನ ಮತ್ತು ಸಂವಹನ ಯಶಸ್ವಿಯಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ಬರಲಿದ್ದು ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಳಿನ್ ಕುಮಾರ್ ಕೃತಜ್ಞತೆ ಅರ್ಪಿಸಿದ್ದಾರೆ. ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಅನಂತ್ ಕುಮಾರ್ ಅವರನ್ನು ನಳಿನ್ ಅವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡಿದ್ದಾರೆ.
ಕೇಂದ್ರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿರುವ ಪ್ಲಾಸ್ಟಿಕ್ ಪಾರ್ಕ್ ಗಂಜಿಮಠ ಪರಿಸರದಲ್ಲಿ ಅನುಷ್ಠಾನಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಕಾರಣವಾಗಲಿದೆ. ಈ ಯೋಜನೆಯಿಂದ ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಭರವಸೆ ಈಡೇರಿದಂತಾಗಿದೆ ಹಾಗೂ ಸಂಸದರ ಸಾಧನೆಯ ಪರ್ವಕ್ಕೆ ಮತ್ತೊಂದು ಗರಿ ಬಂದಿದೆ.