ಹೊಸದಿಲ್ಲಿ: ರನ್ವೇ ಅತಿಕ್ರಮಣ ಪರ್ಯಾಯ ಪರಿಹಾರವಾದ ಎಂಜಿನಿಯರಿಂಗ್ ಮೆಟೀರಿಯಲ್ಸ್ ಅರೆಸ್ಟಿಂಗ್ ಸಿಸ್ಟಮ್ (ಇಎಂಎಎಸ್) ನ್ನು ಕೇರಳದ ಕ್ಯಾಲಿಕಟ್, ರಾಜ್ಯದ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಅಳವಡಿಸುವ ಕುರಿತು ಸುಪ್ರೀಂಕೋರ್ಟ್ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನೋಟಿಸ್ ನೀಡಿದೆ.
ಇಎಂಎಎಸ್ ಸ್ಥಾಪನೆ ಕೋರಿ ಸಲ್ಲಿಸಿದ ಅರ್ಜಿಯ ಕುರಿತು ಕೋರ್ಟ್ ಬುಧವಾರ ನೋಟಿಸ್ ನೀಡಿದ್ದು, ಕ್ಯಾಲಿಕಟ್ನಲ್ಲಿ ಸಂಭವಿಸಿದ ಅಪಘಾತದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಅರ್ಜಿದಾರರ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ನ್ಯಾಯಪೀಠವು ಬುಧವಾರ ನೋಟಿಸ್ ನೀಡಿದೆ.
ಅರ್ಜಿದಾರರು, ಇಎಂಎಎಸ್, ಅಗತ್ಯವಿರುವ ರನ್ವೇ ಮತ್ತು ವಿಮಾನ ನಿಲ್ದಾಣಗಳನ್ನು ಪರೀಕ್ಷಿಸುತ್ತದೆ. ಅದರಿಂದ ದೇಶದ ಅಗತ್ಯ ವಿಮಾನ ನಿಲ್ದಾಣಗಳಲ್ಲಿ ಇಎಂಎಎಸ್ ಸ್ಥಾಪಿಸುವಂತೆ ನಿರ್ದೇಶನ ನೀಡಲು ಕೋರಿದ್ದರು.
ಆಗಸ್ಟ್ 7ರಂದು ಕೊಯಿಕೋಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ 10 ಮಕ್ಕಳು ಸೇರಿದಂತೆ 190 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಪಘಾತಕ್ಕೆ ಈಡಾಗಿತ್ತು. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್ ಮೃತಪಟ್ಟು, 21 ಜನ ಗಾಯಗೊಂಡಿದ್ದರು.ಈ ಬಗ್ಗೆ ತನಿಖೆ ನಡೆಯುತ್ತಿದೆ.
ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದು, ಏರ್ ಇಂಡಿಯಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಕ್ಯಾಪ್ಟನ್ ಎಸ್.ಎಸ್. ಆದೇಶಿಸಿದ ಕೆಲ ತಿಂಗಳಲ್ಲಿ ತಮ್ಮ ವರದಿ ಸಲ್ಲಿಸಲಿದ್ದಾರೆ ಎಂದರು. ಈ ಅಪಘಾತಕ್ಕೆ ಕಾರಣವಾಗುವ ಸಂಭವನೀಯ ಕಾರಣವಾದ ಅಂಶಗಳನ್ನು ತನಿಖಾಧಿಕಾರಿ ನಿರ್ಧರಿಸುತ್ತಾರೆ ಎಂದು ಕೇಂದ್ರ ಸಚಿವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.