ಮಂಡ್ಯ: ಟಿಪ್ಪರ್ ಲಾರಿ ಹರಿದು ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ.
ಹಾಡ್ಯ ಗ್ರಾಮದ ಶಶಿಕಲಾ (35), ಲಾವಣ್ಯ(4), ಮೃತಪಟ್ಟಪಟ್ಟವರು. ಸಣ್ಣಪುಟ್ಟ ಗಾಯಗಳೊಂದಿಗೆ ದೇವರಾಜು (45) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ದೇವರಾಜು ಅನಾರೋಗ್ಯದ ನಿಮಿತ್ತ ಮಗಳು ಲಾವಣ್ಯಳಿಗೆ ಚಿಕಿತ್ಸೆ ಕೊಡಿಸಲು ತಮ್ಮ ಟಿವಿಎಸ್ ಸ್ಕೂಟರ್ (ಕೆಎ.11 ಇಎನ್-9016) ನಲ್ಲಿ ಮಂಡ್ಯದ ಖಾಸಗಿ ಆಸ್ಪತ್ರೆಗೆ ಪತ್ನಿ ಶಶಿಕಲಾ ಜೊತೆ ಬಂದಿದ್ದರು, ಮಗುವಿಗೆ ಚಿಕಿತ್ಸೆ ಕೊಡಿಸಿದ ಬಳಿಕ ಸ್ವಗ್ರಾಮಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಹೊಳಲು ಗ್ರಾಮದ ಸರ್ಕಲ್ನಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ (ಕೆ.ಎ.11 ಬಿ-9408) ಟಿವಿಎಸ್ ಗೆ ಡಿಕ್ಕಿ ಹೊಡೆದಿದೆ.
ಕೆಳಕ್ಕೆ ಬಿದ್ದ ತಾಯಿ,ಮಗು ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪವಾಡ ಸದೃಶ ರೀತಿಯಲ್ಲಿ ದೇವರಾಜು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದ ಗ್ರಾಮಾಂತರ ಠಾಣಾ ಪಿಎಸ್ಐ ಸಿದ್ದರಾಜು ನೇತೃತ್ವದ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಂಬುಲೆನ್ಸ್ನಲ್ಲಿ ಶವಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.