ಬೆಂಗಳೂರು: ಮಾನ್ಸೂನ್ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೊತೆಗೆ ಇದ್ಕಫ್ಕೆ ಮುನ್ನುಡಿ ಎಂಬಂತೆ ಶುಕ್ರವಾರ ರಾತ್ರಿಯಿಂದ ರಾಜ್ಯದ ಹಲವೆಡೆಗಳಲ್ಲಿ
ಭಾರೀ ಮಳೆ ಸುರಿದಿದೆ.
ಇನ್ನಷ್ಟು ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಶನಿವಾರ ಸಂಜೆ ಬಾದಾಮಿಯಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು ಜೊತೆಯಲ್ಲೇ ಇದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನ ಒಂದು ಮನೆ ಕುಸಿದಿದ್ದು ತಗ್ಗು ಪ್ರದೇಶಗಳ 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ರಾತ್ರಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕರಾವಳಿ ಭಾಗದಲ್ಲಿ ಕಡಲು ಪ್ರಕ್ಷುಭಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಈಗಾಗಲೇ ಕಡಲಿಗಿಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.