ಮoಡ್ಯ: ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಒ ಅಂಡ್ ಎಂ ಯೋಜನೆಗೆ ನಿಯೋಜಿಸುವಂತೆ ಮೈಸೂರು ರಾಜವಂಶಸ್ಥ ಯಧವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆಯು ಕಬ್ಬು ಬೆಳೆ, ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದು. ಆದರೆ, ಪ್ರತಿರೋಧವು ಕಳವಳಕ್ಕೆ ಕಾರಣವಾಗಿದೆ ಎಂದು ತಮ್ಮ ಫೇಸ್ಬುಕ್ ಪೇಜ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ರೈತರು ಬೆಳೆದಿರುವ ಕಬ್ಬು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯತೆ ಇದೆ. ಕಾರ್ಖಾನೆ ನಡೆಸುವಲ್ಲಿ ಸರ್ಕಾರದ ವೈಫಲ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ (ಒ ಅಂಡ್ ಎಂ) ವ್ಯವಸ್ಥೆಯಡಿಯಲ್ಲಿ ಸಕಾಕರೆ ಕಾರ್ಖಾನೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಿಸಿದ್ದಾರೆ.
ಈ ವ್ಯವಸ್ಥೆ ಖಾಸಗೀಕರಣದ ವಿರುದ್ಧ ಸಾರ್ವಜನಿಕರಿಗಿರುವ ಭಾವನೆಯನ್ನು ತೃಪ್ತಿಪಡಿಸುತ್ತದೆ. ಇದರಿಂದ ಕಾರ್ಖಾನೆ ಮತ್ತೊಮ್ಮೆ ಸಮೃದ್ಧಿಯಾಗಿ ಕರ್ಯನಿರ್ವಹಿಸಬಹುದು. ಜಿಲ್ಲೆಯ ಕಬ್ಬು ಬೆಳೆಗಾರರು ಯಾವುದೇ ಸಂಕಷ್ಟಗಳನ್ನು ಎದುರಿಸಬೇಕಾಗಿರುವುದಿಲ್ಲ ಎಂದು ಅವರು ಫೇಸ್ಬುಕ್ ಪೇಜ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.