ಮೈಸೂರು: ವೃತ್ತಿ ವೈಷಮ್ಯದಿಂದ ಯುವ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ೭ ಜನ ಆರೋಪಿಗಳನ್ನು ಮೈಸೂರಿನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಸುಪಾರಿ ಹಂತಕರಾದ ನವೀನ್, ಅಶೋಕ್, ಪ್ರಶಾಂತ್, ಜಾನಿ, ದಿನೇಶ್, ಮಹೇಶ್ ಮತ್ತು ಮುಬಾರಕ್ ಎಂಬುವರೇ ಬಂಧಿತರು. ಇವರಿಂದ ಕೃತ್ಯಕ್ಕೆ ಬಳಸಿದ್ದ ೨ ಬೈಕ್, ೧ ಕಾರ್, ೧ ಚಾಕುವನ್ನು ವಶಪಡಿಸಕೊಳ್ಳಲಾಗಿದೆ. ಪ್ರಮುಖ ಆರೋಪಿ, ಸುಪಾರಿ ನೀಡಿದ ರಾಜಾರಾಮ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಘಟನೆಯ ಹಿನ್ನಲೆ
ಜೂನ್ ೧೭ ರಂದು ಬೆಳಗ್ಗೆ ೧೦:೩೦ಕ್ಕೆ ಯುವ ಉದ್ಯಮಿ ಅಶ್ರಿತ್ ಎಂಬಾತ ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿ ಟೀ ಕುಡಿಯಲು ಬೈಕ್ನಲ್ಲಿ ಬರುತ್ತಿದ್ದ. ಈ ವೇಳೆ ಆತನ ಬೈಕಿಗೆ ಡಿಕ್ಕಿ ಹೊಡೆದು ಆರೋಪಿಗಳು ಸ್ಥಳದಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬAಧ ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು, ಆರೋಪಿಗಳ ಪತ್ತೆಗಾಗಿ ೨ ತಂಡ ರಚಿಸಿದ್ದರು.
ಕೊಲೆಯಾದ ಅಶ್ರಿತ್ ಈ ಹಿಂದೆ ರಾಜಾರಾಮ್ ಎಂಬ ವ್ಯಕ್ತಿಯ ಬಳಿ ಹೇರ್ ಮತ್ತು ಸ್ಕಿನ್ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ವೈಷಮ್ಯ ಉಂಟಾಗಿ, ಕೊಲೆಯಾದ ಅಶ್ರಿತ್ ಬೇರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ ರಾಜಾರಾಮ್ ಈತ ನನ್ನ ಕೆಲಸದಲ್ಲಿ ತೊಡಗಿದ್ದಾನೆ. ನನ್ನ ವೃತ್ತಿಯ ಗುಟ್ಟನ್ನು ಹೊರಗೆ ಹೇಳಿದರೆ, ತನಗೆ ತೊಂದರೆ ಎಂದು ಅಶ್ರಿತ್ನನ್ನು ಮುಗಿಸಲು ಸುಪಾರಿ ಕೊಟ್ಟಿದ್ದಾನೆ. ಬಳಿಕ ಸುಪಾರಿ ಹಂತಕರು ಜೂನ್ ೧೭ರಂದು ಅಶ್ರಿತ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.