ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಲಿಕ್ಕರ್ ಮಾಫಿಯಾವನ್ನು ಮಟ್ಟಹಾಕಲು ಹೋಗಿ ದುಷ್ಕರ್ಮಿಗಳಿಂದ ಕಾನ್ಸ್ಟೇಬಲ್ ಓರ್ವರು ಹತ್ಯೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾಸ್’ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಈ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್’ಕೌಂಟರ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸೊಂಕರ್ ಮಾಹಿತಿ ನೀಡಿದ್ದು, ಪೊಲೀಸ್ ತಂಡವೊಂದು ಲಿಕ್ಕರ್ ಮಾಫಿಯಾ ಕಿಂಗ್ಪಿನ್ಗೆ ವಾರೆಂಟ್ ನೀಡಲು ಕಾಸ್ಗಂಜ್ ಜಿಲ್ಲೆಯ ಗ್ರಾಮವೊಂದಕ್ಕೆ ಹೋಗಿದ್ದರು. ಆ ವೇಳೆ ದುಷ್ಕರ್ಮಿಗಳು ಕಾನ್ಸ್ಟೇಬಲ್ ದೇವೇಂದ್ರ ಅವರನ್ನು ಹತ್ಯೆ ಮಾಡಿದ್ದು, ಎಸ್ಐ ಅಶೋಕ್ ಕುಮಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ. ಮತ್ತೊರ್ವ ಪರಾರಿಯಾಗಿದ್ದು, ಅವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಮನೋಜ್ ಸೊಂಕರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೃತ ಕಾನ್ಸ್ಟೇಬಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಗಾಯಾಳು ಎಸ್ಐಗೆ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.