ಶಿವಮೊಗ್ಗ : ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ 289 ಮಂದಿ ಆಗಮಿಸಿದ್ದಾರೆ.
ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ವಿವಿಧ 7ರಾಜ್ಯಗಳಿಂದ ಒಟ್ಟು 148ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತ್ 9 ಮಂದಿ ಇದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹೈರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್ಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರೆಂಟೈನ್ಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.