ಮಂಗಳೂರು: ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಾಲ್ ಇರುವ ಔಷಧಿ ನೀಡದಂತೆ ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.
ವೈದ್ಯರ ಸಲಹಾ ಚೀಟಿ ಮುಖಾಂತರ ಔಷಧ ನೀಡಿದಲ್ಲಿ ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಕೂಡ ಅವರು ಸೂಚಿಸಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಔಷಧ ಹಾಗೂ ಕಾಂತಿವರ್ಧಕಗಳ ಅಧಿನಿಯಮ 1940 ಮತ್ತದರ ನಿಯಮಗಳಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದಾಗಿ ಈ ಸೂಚನೆ ನೀಡಲಾಗಿದೆ.