ಹೊಸ ದಿಗಂತ ವರದಿ, ಮಡಿಕೇರಿ:
ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೆ ಕೊಡವ ಸಂಸ್ಕøತಿಯನ್ನು ಉಳಿಸಿ, ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಕರೆ ನೀಡಿದ್ದಾರೆ.
ಮಕ್ಕಂದೂರು ಕೊಡವ ಸಮಾಜದ ವತಿಯಿಂದ ಪುತ್ತರಿ ಊರೊರ್ಮೆ ಮತ್ತು ಕೋಲ್ ಮಂದ್ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಕೊಡವ ಸಂಸ್ಕøತಿ ಉಳಿದಿದ್ದು, ಅದನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕೆಂದರು. ಯುವ ಸಮೂಹ ಕೊಡಗಿನ ಸಂಸ್ಕøತಿಯ ಬಗ್ಗೆ ಆಳವಾಗಿ ಅರಿತುಕೊಂಡು ಮುಂದಿನ ಪೀಳಿಗೆಗೆ ತಿಳಿಸುವ ಮಹತ್ತರ ಜವಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಸುನೀಲ್ ಸುಬ್ರಮಣಿ ಹೇಳಿದರು.
ಕೋಲ್ ಮಂದ್ ಕಾರ್ಯಕ್ರಮಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಚಾಲನೆ ನೀಡಿದ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಬುಡಕಟ್ಟು ಸ್ಥಾನಮಾನವನ್ನು ಕೊಡವ ಸಮುದಾಯ ಸಾಂವಿಧಾನಿಕವಾಗಿ ಶಾಂತಿಯುತ ಹೋರಾಟದ ಮೂಲಕ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮಕ್ಕಂದೂರಿನ ಶ್ರೀಭದ್ರಕಾಳೇಶ್ವರಿ ದೇವಾಯದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರಣಿಗೆಯ ಮೂಲಕ ಉಮ್ಮೇಟ್ಟಿ ಕೋಲ್ ಮಂದ್ ಗೆ ತೆರಳಿ ಸಾಂಪ್ರದಾಯಿಕವಾಗಿ ಕೋಲಾಟ ಆಡಲಾಯಿತು. ಕತ್ತಿಯಾಟ್, ಬೊಳಕಾಟ್ ಹಾಗೂ ಉಮ್ಮತ್ತಾಟ್ ಕೂಡ ನಡೆಯಿತು.
ಮಕ್ಕಂದೂರು ಕೊಡವ ಸಮಾಜದ ನೂತನ ಮಹಿಳಾ ತಂಡದ ಲೋಗೋವನ್ನು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಹಾಗೂ ಯುವಕರ ತಂಡದ ಲೋಗೋವನ್ನು ಎನ್.ಯು.ನಾಚಪ್ಪ ಅವರು ಬಿಡುಗಡೆ ಮಾಡಿದರು.
ಕೊಡವ ಸಮಾಜದ ಅಧ್ಯಕ್ಷ ನಾಪಂಡ ಎಂ.ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ಐಚೆಟ್ಟಿರ ಬೋಪಣ್ಣ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು