ಲಖನೌ: ದಲಿತ ಮಹಿಳೆಯ ಮೇಲೆ ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ ಮತ್ತು ಈ ಪ್ರಕರಣದ ಸಾಕ್ಷಿಗಳು ರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ಸ್ಪಷ್ಟಪಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ಎ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಈ ಘಟನೆಯ ಕುರಿತು ರಾಜಕೀಯ ತಿರುವು ಪಡೆಯುತ್ತಿದ್ದು, ಈಗ ಸುಪ್ರೀಂ ಈ ಕ್ರಮ ಕೈಗೊಂಡಿದ್ದು, ಘಟನೆಯ ತನಿಖೆ ಸುಗಮವಾಗುವ ಭರವಸೆ ನೀಡಿದೆ.
ಸಾಕ್ಷಿ ಸಂರಕ್ಷಣೆಯ ಕುರಿತು ಮಾಹಿತಿ ನೀಡಲು ಅಫಿಡವಿಟ್ ಸಲ್ಲಿಸಿ ಅ.8ರೊಳಗೆ ಮಾಹಿತಿ ನೀಡಬೇಕು ಎಂದು ಸಿಜೆಐ ಬೊಬ್ಡೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದರು.
ಈ ಅಪರಾಧದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಸತ್ಯಂ ದುಬೆ ಮತ್ತು ಇಬ್ಬರು ವಕೀಲರಾದ ವಿಶಾಲ್ ಠಾಕ್ರೆ ಮತ್ತು ರುದ್ರ ಪ್ರತಾಪ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.
ಮುಂದಿನ ವಾರ ನ್ಯಾಯಾಲಯ ವಿಚಾರಣೆ ನಡೆಸಲಿದೆ.