ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಹರ್ಷನ ಕೊಲೆ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಆರೋಪಿಗಳು ಕೇಳಿಬರುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ , ಹರ್ಷನ ಕೊಲೆ ಆರೋಪಿಗಳಿಗೆ ಜೈಲಿನ ಒಳಗೆ ಮೊಬೈಲ್ ಸಿಕ್ಕಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಇನ್ನು ಕೊಲೆ ಆರೋಪಿಗಳಿಗೆ ಸಹಾಯ ಮಾಡಿದ ಜೈಲಾಧಿಕಾರಿಗಳನ್ನು ವರ್ಗಾವಣೆ ಮಾಡಲು ಆದೇಶ ನೀಡಿದಿದ್ದಾ. ಇನ್ನು ಸರ್ಕಾರ ಜೈಲಿನಲ್ಲಿ ಜಾಮರ್ ಅಳವಡಿಸಲು ಜಜೆಟ್ ನಲ್ಲಿ ಹಣವನ್ನು ನೀಡಿದೆ. ಶೀಘ್ರದಲ್ಲಿ ಜೈಲಿನಲ್ಲಿ ಜಾಮರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದರು.
ಜೈಲಿನಲ್ಲಿನ ಆರೋಪಿಗಳಿಗೆ, ಬಂಧಿಗಳಿಗೆ ಮೊಬೈಲ್ ನೀಡುವುದು, ಖೈದಿಗಳಿಗೆ ಸಹಾಯ ಮಾಡುವ ಜೈಲಾಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲು ಮಾಡಲಾಗುವುದು. ಇನ್ನು ಜೈಲಿನಲ್ಲಿ ನಡೆಯುತ್ತಿರುವ ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ದಾಳಿ ನಡೆಸಲಾಗಿದೆ.