ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಕಾರ್ಯನಿರ್ವಹಿಸಲಿದ್ದಾರೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿಯವರು, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಬಳಿಕ ಮಂಗಳೂರಿನ ಎನ್‌ಐಟಿಕೆಯಲ್ಲಿ (ಅಂದಿನ ಕೆಆರ್‌ಇಸಿ) ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಪೂರೈಸಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು ೨೦೧೮ರಲ್ಲಿ ಸೇವಾ ನಿವೃತ್ತಿಹೊಂದಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಉಮಾಪತಿ, ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗದ ವಿಭಾಗ ಸಂಘ ಚಾಲಕರಾಗಿ ಡಾ. ನಾರಾಯಣ ಶೆಣೈ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!