ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರನ್ನು ಅನಾರೋಗ್ಯದಿಂದ ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಸೋಂಕಿಗೆ ಒಳಗಾದ ನಂತರ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕಾಲಾನಂತರದಲ್ಲಿ ಅವರ ಆರೋಗ್ಯವು ಹದಗೆಟ್ಟಿದೆ’ ಎಂದು ಅವರ ಸಹ ಅರ್ಚಕರಾದ ಕಮಲ್ ನಯನ್ ದಾಸ್ ಹೇಳಿದರು.
ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದರಿಂದ ಐಸಿಯುಗೆ ದಾಖಲಿಸಲಾಗಿದೆ.ಮಹಂತ್ ನೃತ್ಯ ಗೋಪಾಲ್ ದಾಸ್ ಅವರಿಗೆ ಮೂತ್ರನಾಳದ ಸೋಂಕು, ತೀವ್ರ ಮೂತ್ರಪಿಂಡ ವೈಫಲ್ಯ ಮತ್ತು ದೌರ್ಬಲ್ಯವಿದೆ ಎಂದು ಮೇದಾಂತ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!