ಹೊಸ ದಿಗಂತ ವರದಿ, ಧಾರವಾಡ:
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬಿಜೆಪಿ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀನರ ವೃತ್ತದಿಂದ ಕಾಲ್ನಡಿಗೆ ಜಾಥಾ ಮೂಲಕ ಬಂದ ನಾಯಕರಿಗೆ ಜಯ ನಗರ ವೃತ್ತದಲ್ಲಿ ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜ್ಯೋಷಿ, ವಿಧಾನಸಭೆ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರು ಸೇರಿದಂತೆ ಸಹಸ್ರ ಸಂಖ್ಯೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



