ಕಾರು- ಸಾರಿಗೆ ಬಸ್ ನಡುವೆ ಭೀಕರ ಅಪಘಾತ: 4 ಜನರ ದಾರುಣ ಸಾವು

ಹೊಸದಿಗಂತ ವರದಿ,ಅಂಕೋಲಾ:

ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಅಪಘಾತ ಸಂಭವಿಸಿ 4 ಜನ ದಾರುಣವಾಗಿ ಮೃತ ಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಕಾರವಾರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ತಮಿಳುನಾಡು ನೋಂದಣಿ ಸಂಖ್ಯೆ ಟಿ.ಎನ್ 11 ಎ.ವಿ 9876 ಹೊಂದಿರುವ ಕಾರು ಚತುಷ್ಪತ ರಸ್ತೆಯಲ್ಲಿ ಡಿವೈಡರ್ ಡಾಟಿ ತಪ್ಪು ಬದಿಗೆ ಚಲಿಸಿ ಅಂಕೋಲಾ ಕಡೆಯಿಂದ ಬಾಳೇಗುಳಿ ಕಡೆ ಹೋಗುತ್ತಿದ್ದ ತದಡಿ ಹುಬ್ಬಳ್ಳಿ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಜನರು ಸ್ಥಳದಲ್ಲಿಯೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಂಕೋಲಾ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಕಾರಿನಲ್ಲಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದು ಗಾಯಾಳುವನ್ನು ಕಾರವಾರ ಆಸ್ಪತ್ರೆಗೆ ಸಾಗಿಸಲಾಗಿದೆ
ಮೃತರ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ, ಪಿ.ಎಸ್. ಐ ಪ್ರವಿಣಕುಮಾರ್, ಮಹಾಂತೇಶ ವಾಲ್ಮೀಕಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!