ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶ್ವಿಯಾಗಿದ್ದಾರೆ.
ಈ ಘಟನೆಗೆ ಸಂಬಂಧ ಬೇಕಲದ ಕ್ವಾಟರ್ಸ್ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಬಂಧಿಸಲಾಗಿದೆ.
ಗುಜರಿ ಹೆಕ್ಕುವ ವೃತ್ತಿಯಲ್ಲಿರುವ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಈಕೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆಬಂದಿದೆ.
ಆ. ೨೧ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು. ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು, ಬೀಮ್ ಪತ್ತೆಯಾಗಿತ್ತು. ರೈಲ್ವೆ ಗಾರ್ಡ್ಗಳ ಸಮಯಪ್ರಜ್ಞೆಯಿಂದ ಸಂಭಾವ್ಯ ದುರಂತ ತಪ್ಪಿ ಹೋಗಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ