ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಗಲಿಗೆ ಮಹತ್ವದ ಜವಾಬ್ದಾರಿ ನೀಡಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ತಾರ್ ಅಬ್ಬಾಸ್ ನಖ್ವಿ ಇಂದು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನೆಲ್ಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ.
ಇತ್ತ ಇದರೊಂದಿಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಉಕ್ಕು ಸಚಿವಾಲಯದ ಉಸ್ತುವಾರಿ ನೀಡಲಾಗಿದೆ.
ಮುಖ್ತಾರ್ ಅಬ್ಬಾಸ್ ನಖ್ವಿ ಇಂದು ಧಾನಿ ನರೇಂದ್ರ ಮೋದಿ ಅವ್ರನ್ನ ಭೇಟಿಯಾಗಿ ನಖ್ವಿ ರಾಜೀನಾಮೆ ನೀಡಿದ್ದರು. ನಖ್ವಿ ಇಂದು ತಮ್ಮ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!