ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತ್ಯತೀತ ಜನತಾದಳ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷದ ರಾಜ್ಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರಾಗಿ 65 ಮಂದಿ ಆಯ್ಕೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿ ಹೆಚ್.ಸಿ.ನೀರಾವರಿ ಅವರು ಪ್ರಕಟಿಸಿ ಆಯ್ಕೆ ಪ್ರಮಾಣ ಪತ್ರ ನೀಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಹೆಚ್.ಸಿ.ನೀರಾವರಿ ಅವರನ್ನು ಹೆಚ್.ಡಿ.ಕುಮಾರಸ್ವಾಮಿ, ಬಂಡೆಪ್ಪ ಕಾಷೆಂಪೂರ್, ಎನ್.ಎಂ.ನಬಿ, ರಾಜಾ ವೆಂಕಟಪ್ಪ ನಾಯಕ ಮುಂತಾದವರು ಸನ್ಮಾನಿಸಿ ಗೌರವಿಸಿದರು.
ಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!