ಟೌನ್‌ಹಾಲ್‌ ಬಳಿ ಪ್ರತಿಭಟನಾಕಾರರು-ಪೊಲೀಸರ ನಡುವೆ ತಳ್ಳಾಟ ನೂಕಾಟ: ವಾಟಾಳ್‌ ನಾಗರಾಜ್‌ ಖಾಕಿ ವಶಕ್ಕೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎರಡು ರಾಜ್ಯಗಳ ನಡುವಿನ ಕಾವೇರಿ ವಿವಾದದ ಕಿಡಿ ಕರ್ನಾಟಕದಲ್ಲಿ ಹೊತ್ತಿ ಉರಿಯುತ್ತಿದೆ. ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯುತ್ತಿರುವ ಕರ್ನಾಟಕ ಬಂದ್‌ಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಬೆಂಗಳೂರಿನಲ್ಲಿ ಟೌನ್‌ಹಾಲ್‌ ಬಳಿ ಆಕ್ರೋಶ ಭುಗಿಲೆದ್ದಿತು.

ಬಂದ್‌ ವಿರೋಧಿಸಿ ನಿನ್ನೆ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ನಿಷೇಧಾಜ್ಞೆ ಜಾರಿಗೊಳಿಸದ್ದರು. ಪ್ರತಿಭಟನೆ, ಮೆರವಣಿಗೆಗೆ ಅವಕಾಶ ಇಲ್ಲ ಎಂಬುದಾಗಿ ತಿಳಿಸಿದ್ದರು. ಫ್ರೀಡಂಪಾರ್ಕ್‌ಗೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ವಾಟಾಳ್‌ ನಾಗರಾಜ್‌ ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ಟೌನ್‌ಹಾಲ್‌ ಬಳಿ ತಡೆದರು. ಇದರಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ, ಪೊಲೀಸರು ಹಾಗೂ ಪ್ರತಿಭಟನಾಕಾರ ನಡುವೆ ತಳ್ಳಾಟ-ನೂಕಾಟ ನಡೆದಿದೆ.

ಮೆರವಣಿಗೆಗೆ ಅನುಮತಿ ನೀಡದ ಪೊಲೀಸರು ವಾಟಾಳ್‌ ನಾಗರಾಜ್‌ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!