ಡಾ. ಸರ್ಪಂಗಳ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬದಿಯಡ್ಕ ಖ್ಯಾತ ಹಿರಿಯ ದಂತ ವೈದ್ಯ ಡಾ. ಕೃಷ್ಣಮೂರ್ತಿ ಯವರ ಅನುಮಾನಾಸ್ಪದ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ನ.18 ರಂದು ಸಂಜೆ 6 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್ ನ ಮುಂಭಾಗ ಮೌನ ಪ್ರತಿಭಟನೆ ಮತ್ತು ಹಣತೆ ಬೆಳಗಿ ಪ್ರತಿಭಟನೆ ಮಂಗಳೂರು ಹವ್ಯಕ ಸಭಾ ದಕ್ಷಿಣ ಕನ್ನಡ, ಕಾಸರಗೋಡು ಹವ್ಯಕ ಮಹಾಸಭಾ ಮತ್ತು ಮಂಗಳೂರು ಹವ್ಯಕ ಮಂಡಲ ಇದರ ಜಂಟಿ ಆಶ್ರಯದಲ್ಲಿ ಜರಗಲಿದೆ.
ಹವ್ಯಕ ಸಭಾ ಇದರ ಸುಮಾರು 250 ಮಂದಿ ಸದಸ್ಯರು ಈ ಮೌನ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಇದೊಂದು ಶಾಂತಿಯುತ ಪ್ರತಿಭಟನೆ ಯಾಗಿದ್ದು, ಈ ಸಾವಿನ ರಹಸ್ಯದ ಹಿಂದೆ ಇರುವ ಹುನ್ನಾರವನ್ನು ಬಯಲಿಗೆ ತರಲು ಮತ್ತು ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲು ಹಕ್ಕೊತ್ತಾಯ ಮಂಡಿಸಲು ಈ ಮೌನ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹವ್ಯಕ ಸಭಾ ಮಂಗಳೂರು ಇದರ ಅಧ್ಯಕ್ಷರಾದ ಡಾ.ರಾಜೇಂದ್ರ ಪ್ರಸಾದ್ ಹವ್ಯಕ ಮಂಡಲದ ಅಧ್ಯಕ್ಷ ಗಣೇಶ ಕಾಶಿ ಮಠ, ದ.ಕ. ಹಾಗೂ ಕಾಸರಗೋಡು ಹವ್ಯಕ ಮಹಾಸಭಾ ಇದರ ಅಧ್ಯಕ್ಷ ರಾದ ಶ್ರೀ ನಿಡುಗಳ ಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!