ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ ₹ 731.03 ಕೋಟಿ ಹಣವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಭರವಸೆ ನೀಡಿದ್ದರು.
ಆ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ ಸರಕಾರ ಆದೇಶಿಸಿದೆ.