ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನೂ ಭೇಟಿಯಾಗಿ ಬೆಂಬಲಕೋರಿದ್ದಾರೆ.
ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಂಡರು.
ಈ ಭೇಟಿ ಸಂದರ್ಭ ದೇವೇಗೌಡರ ಜತೆ ಅವರ ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಕೂಡ ಉಪಸ್ಥಿತರಿದ್ದು, ಮಾತುಕತೆ ನಡೆಸಿದರು. ದೇವೇಗೌಡ ಕುಟುಂಬಸ್ಥರು ಈ ವೇಳೆ ದ್ರೌಪದಿ ಮುರ್ಮು ಅವರಿಗೆ ವಿಶೇಷ ಸತ್ಕಾರಗಳೊಂದಿಗೆ ಉಪಚರಿಸಿದರು. ಬಳಿಕ ದೇವೇಗೌಡರ ಪತ್ನಿ ಚನ್ನಮ್ಮ ಮನೆಯ ಗೇಟ್ವರೆಗೂ ಬಂದು ದ್ರೌಪದಿ ಅವರನ್ನು ಬೀಳ್ಕೊಟ್ಟರು.