July 21, 2026
Tuesday, July 21, 2026
spot_img

ದೌಸಾ ರಸ್ತೆ ಅಪಘಾತದ ಸಂತ್ರಸ್ತರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೌಸಾ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಗಳು ಜೀವಹಾನಿಗೆ ದುಃಖ ವ್ಯಕ್ತಪಡಿಸಿದರು ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ, “ರಾಜಸ್ಥಾನದ ದೌಸಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ರವಿಪ್ರಕಾಶ್ ಶರ್ಮಾ ಅವರ ಪ್ರಕಾರ, ಖತು ಶ್ಯಾಮ್ ದೇವಸ್ಥಾನದಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕಪ್ ಟ್ರಕ್ ಮತ್ತು ಬಾಪಿ ಗ್ರಾಮದ ಬಳಿ ಟ್ರೇಲರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಉತ್ತರ ಪ್ರದೇಶದ ಇಟಾದ 11 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ 11 ಕ್ಕೆ ಏರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !