ನಿಮ್ಮ ಸಮಸ್ಯೆಗಳಿಗೆ ಸಿಬ್ಬಂದಿಗಳನ್ನು ಉಪವಾಸಕ್ಕೆ ದೂಡಬೇಡಿ: ಮುರುಘಾ ಶ್ರೀಗಳಿಗೆ ಮೆಮೊ ಸಲ್ಲಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳು ಚೆಕ್ ಹಾಗೂ ಇತರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಶ್ರೀಗಳ ಪರ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದ್ದಾರೆ.
ಮುರುಘಾ ಶ್ರೀಗಳು ಚೆಕ್ ಗಳಿಗೆ ಸಹಿ ಹಾಕದಿದ್ದರೆ ಮಠದ ಸಿಬ್ಬಂದಿ ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಪಾವತಿ ಹಾಗೂ ಇತರ ಖರ್ಚುಗಳಿಗೆ ಸಮಸ್ಯೆಯಾಗಲಿದೆ.ಸಿಬ್ಬಂದಿಗಳಿಗೆ ವೇತನ ನೀಡಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಾದ ಆಲಿಸಿದ ಹೈಕೋರ್ಟ್, ನಿಮ್ಮ ಸಮಸ್ಯೆಗಳಿಗೆ ಸಿಬ್ಬಂದಿಗಳನ್ನು ಉಪವಾಸಕ್ಕೆ ದೂಡಬೇಡಿ. ಮುರುಘಾ ಶ್ರೀಗಳ ಬಂಧನಕ್ಕೆ ಮೊದಲು ಹೇಗೆ ಸಂಬಳ, ಖರ್ಚುವೆಚ್ಚ ನಿಭಾಯಿಸಲಾಗುತ್ತಿತ್ತು ಎಂಬ ಬಗ್ಗೆ ವಿವರವಾದ ಮಾಹಿತಿ ಇರುವ ಮೆಮೊ ಸಲ್ಲಿಸಿ ಎಂದು ವಕೀಲರಿಗೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!