ಪರಿಷತ್ ಎಂ ಎಲ್ ಸಿ ಸ್ಥಾನಕ್ಕೆ ಗುಡ್ ಬೈ ಹೇಳಿದ ಸಿಎಂ ಇಬ್ರಾಹಿಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಪರಿಷತ್ ಎಂ ಎಲ್ ಸಿ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ಅವರು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ನಿನ್ನೆ ಅಧಿಕೃತವಾಗಿ ಪ್ರಕಟಿಸಿದ್ದ ಅವರು, ಇಂದು ಬೆಳಿಗ್ಗೆ 11ಗಂಟೆಗೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಿಸಿದ್ದರು. ಅದರಂತೆ ಇಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಸಿಎಂ ಇಬ್ರಾಹಿಂ ಅವರು, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅಧಿಕೃತವಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ಗುಡ್ ಬೈ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!