ಹೊಸ ದಿಗಂತ ವರದಿ, ಬೆಂಗಳೂರು
ಪ್ರವೀಣ್ ಹತ್ಯೆ ನಂತರ ಪಕ್ಷದ ಪರವಾಗಿ ಅವರ ಕುಟುಂಬಕ್ಕೆ ಹಣ ಸಂಗ್ರಹಿಸುವುದಾಗಿ ಕೆಲವರು ತಮ್ಮ ವೈಯಕ್ತಿಕ ಖಾತೆ ನೀಡುತ್ತಿರುವುದರ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ಕುಮಾರ್ ಸುರಾಣ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹೇಳಿಕೆಯ ಸಾರ ಹೀಗಿದೆ-
“ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನಾದ ಪ್ರವೀಣ್ ನೆಟ್ಟಾರು ಇವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ ಹಾಗೂ ಮುಂದೆಯೂ ಸರ್ಕಾರ ಮತ್ತು ಪಕ್ಷ ಜೊತೆಗಿರಲಿವೆ. ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಧಣ ಸಂಗ್ರಹ ಮಾಡಬಾರದು.”