ಬಾಕಿ ಹಣ ಕೊಡಿ, ಇಲ್ಲ ಕುರ್ಚಿ ಬಿಟ್ಟು ತೆರಳಿ: ಕೇಂದ್ರ ಸರಕಾರ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಪಶ್ಚಿಮ ಬಂಗಾಳಕ್ಕೆ ನೀಡಬೇಕಾದ 1.15 ಲಕ್ಷ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿ ಪ್ರಧಾನಿ ಮೋದಿ ಅವರನ್ನು ಕೆಲ ಸಚಿವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ. ಈ ಸಂಬಂಧ ಪ್ರಧಾನಿ ಅವರ ಭೇಟಿಗೆ ಸಮಯ ಕೇಳಲಾಗಿದೆ. ಡಿಸೆಂಬರ್​ 18-20ರ ಅವಧಿಯಲ್ಲಿ ಅವರನ್ನು ಭೇಟಿಯಾಗಿ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ನೀವು ಹಣ ಬಿಡುಗಡೆ ಮಾಡದಿದ್ದಲ್ಲಿ ಬಾಕಿ ಹಣ ಕೊಡಿ, ಇಲ್ಲ ಕುರ್ಚಿ ಬಿಟ್ಟು ತೆರಳಿ ಎಂಬ ಘೋಷವಾಕ್ಯಗಳನ್ನು ಕೂಗಬೇಕಾಗುತ್ತದೆ. ಬಿಜೆಪಿಯವರ ಹಾಗೆ ನಾವು ಜನತೆಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಾಕಿ ಹಣ ಬಿಡುಗಡೆ ಮಾಡಿದ್ದರೆ ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಸಹಾಯವಾಗುತ್ತದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!