ಹೊಸ ದಿಗಂತ ವರದಿ, ಮೈಸೂರು:
ತಿಂಡಿ ಕೊಡಿಸುವ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ
ದರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಬಿಳಿಕರೆ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.
ಹೊಸಪುರ ಗ್ರಾಮದ ಕಾಳನಾಯಕ ಸಿಕ್ಕಿಬಿದ್ದವ.
ಈತ ತಿಪ್ಪೂರಿನಲ್ಲಿ ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬoಧ ಇರಿಸಿಕೊಂಡು ಸಿಕ್ಕಿಬಿದ್ದಿದ್ದ.ಪತ್ನಿ ನೀಡಿದ ದೂರಿನ ಹಿನ್ನಲೆ ಕಾಳನಾಯಕ ಎರಡು ವರ್ಷ ಜೈಲುವಾಸ ಅನುಭವಿಸಿ, ಬಿಡುಗಡೆಯಾಗಿ ಬಂದು ಒಂಟಿ ಜೀವನ ಸಾಗಿಸುತ್ತಿದ್ದ.ಆಟವಾಡುತ್ತಿದ್ದ ಬಾಲಕಿಯನ್ನ ತಿಂಡಿ ಕೊಡಿಸುವ ಆಸೆ ತೋರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾಳನಾಯಕನನ್ನ ಕಂಬಕ್ಕೆ ಕಟ್ಟಿದ ಗ್ರಾಮದ ಮುಖಂಡರು, ಧರ್ಮದೇಟು ನೀಡಿದ ನಂತರ, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಳಿಕೆರೆ ಪೊಲೀಸರ ವಶಕ್ಕೆ ನೀಡಿದ್ದಾರೆ.ಆರೋಪಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.