ಬುಲೆಟ್ ಟ್ರೈನ್ ಕಂಪನಿ ಎಂಡಿ ಸತೀಶ್ ಅಗ್ನಿಹೋತ್ರಿಗೆ ಗೇಟ್ ಪಾಸ್ ಕೊಟ್ಟ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶೇಷ ಪ್ರಕರಣ ಮತ್ತು ಔಟ್-ಆಫ್-ಟರ್ನ್ ಆಧಾರದ ಮೇಲೆ ಹುದ್ದೆಗೆ ನೇಮಕಗೊಂಡಿದ್ದ ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ಗುರುವಾರ ವಜಾಗೊಳಿಸಿದೆ.
ಸತೀಶ್ ಅಗ್ನಿಹೋತ್ರಿ ಅವರ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವಂತೆ ನಿರ್ದೇಶಿಸಲಾಗಿದೆ ಎಂದು NHSRCL ಕಂಪನಿ ಕಾರ್ಯದರ್ಶಿಗೆ ರೈಲ್ವೆ ಮಂಡಳಿ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
ಪ್ರಸ್ತುತ NHSRCLನಲ್ಲಿ ನಿರ್ದೇಶಕರಾಗಿ (ಯೋಜನೆಗಳು) ಅಧಿಕಾರದಲ್ಲಿರುವ ರಾಜೇಂದ್ರ ಪ್ರಸಾದ್ ಅವರಿಗೆ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ – ಯಾವುದು ಮೊದಲೋ ಅದು) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!